July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಉಜಿರೆ ನಗರಕ್ಕೆ ಆಗಮಿಸಿ ಬೆಳಾಲ್ ಕ್ರಾಸ್ ನಿಂದ ಭವ್ಯ ಮೆರವಣಿಗೆ ನಡೆಯಿತು.

ಗೋರಥಾ ಯಾತ್ರೆ ಮೆರವಣಿಗೆಯ ಉದ್ಘಾಟನೆಯನ್ನು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ನೇರವೆರಿಸಿ ಶುಭಕೋರಿದರು.

ನಂತರ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೆಂಜ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಎಂ ದಯಾಕರ್ ವಹಿಸಿದ್ದರು.

ವೇದಿಕೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಕೃಷ್ಣ ಭಟ್ ಕೊಕ್ಕಡ, ರಥಯಾತ್ರೆ ಮಾರ್ಗದರ್ಶಕರಾದ ಭಕ್ತಿಭೂಷಣ್ ದಾಸ್ ಪ್ರಭೂಜೀ,ಬೆಳ್ತಂಗಡಿ ಗೋಯಾತ್ರೆ ಸಮಿತಿಯ ಸಂಪತ್ ಬಿ ಸುವರ್ಣ, ಸೌತಡ್ಕ ಗೋ ಶಾಲೆಯ ಅದ್ಯಕ್ಷ ಹರೀಶ್ ಮುಂಡ್ರುಪ್ಪಾಡಿ, ಶ್ರೀ ರಾಧಾ ಸುರಭಿ ಗೋ ಮಂದಿರದ ಕಾರ್ಯಾಧ್ಯಕ್ಷ ತಾರನಾಥ ಕೊಟ್ಟಾರಿ,ಉಪಾಧ್ಯಕ್ಷ ರಾಮದಾಸ್ ಉಪಸ್ಥಿತರಿದ್ದರು.

ಬೆಳ್ತಂಗಡಿ ಗೋಯಾತ್ರೆ ಸಮಿತಿಯ ಸಂಪತ್ ಬಿ ಸುವರ್ಣ ಸ್ವಾಗತಿಸಿದರು.ಉಜಿರೆ ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಪದ್ಮನಾಭ ಶೆಟ್ಟಿಗಾರ್ ಉಜಿರೆ,ದಿನೇಶ್ ಚಾರ್ಮಾಡಿ,ನವೀನ್ ನೆರಿಯ,ಮೋಹನ್ ಬೆಳ್ತಂಗಡಿ, ರಮೇಶ್ ಧರ್ಮಸ್ಥಳ, ಸಂತೋಷ್ ಅತ್ತಾಜೆ,ರಾಘವ ಕಲ್ಮಂಜ, ಮಂಜುನಾಥ ಶೆಟ್ಟಿ ನಿಡಿಗಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗೃಹಜ್ಯೋತಿ : ಮೆಸ್ಕಾಂ ಶಾಖಾ ಕಚೇರಿ ಹಾಗೂ ಉಪವಿಭಾಗದಲ್ಲೂ ದಾಖಲೀಕರಣಕ್ಕೆ ವ್ಯವಸ್ಥೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!