April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಳೆಂಜ ಗ್ರಾಮದ ಶಿಬರಾಜೆ ನಿವಾಸಿ ಸಂತೋಷ್ ಕುಮಾರ್ ಜೈನ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಅಕ್ಷತ್ ರೈ ಅವರನ್ನು ಆರಿಸಲಾಯಿತು.

ಅ.15 ರಂದು ಶಿಬರಾಜೆ ಪಾದೆಯಲ್ಲಿನ ಗ್ರಾಮಾಭ್ಯದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್. ಪಿರೇರಾ ವಹಿಸಿದ್ದರು.

ಅಕ್ಷತ್ ಅವರು ಜೇಸಿ ವಾಣಿ ವಾಚಿಸಿದರು. ಜೆಸಿಂತಾ ಡಿ ಸೋಜ, ಜೋಸೆಫ್ ಪಿರೇರಾ, ಪಿ.ಟಿ. ಸೆಬಾಸ್ಟಿಯನ್, ಜಸ್ವಂತ್ ಪಿರೇರಾ ಮುಂತಾದ ಸದಸ್ಯರು ಶುಭ ಹಾರೈಸಿದರು.

ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್ ಅವರು ಚುನಾವಣೆಯನ್ನು ನಡೆಸಿಕೊಟ್ಟರು.

ನಿತ್ಯಾನಂದ ರೈ, ಬಾಲಕೃಷ್ಣ ದೇವಾಡಿಗ, ವಿನೋದ ಗೌಡ, ಸುಖಲತಾ ರೈ, ವಸಂತ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ