23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

ಗೆಜ್ಜೆಗಿರಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವವು ಬೆಳಿಗ್ಗೆ ಗಣಪತಿ ಹವನ ತೆನೆ ಕಟ್ಟುವ ಮೂಲಕ ಆರಂಭಗೊಂಡಿತು.

ನವರಾತ್ರಿ ಮಹೋತ್ಸವವನ್ನು ಮೇಲ್ಕಾರ್ ಬಿರ್ವ ಸೆಂಟರ್ ಮಾಲಕರಾದ ಕೆ.ಸಂಜೀವ ಪೂಜಾರಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ತಮ್ಮ ಪ್ರಸ್ತಾವನೆಯಲ್ಲಿ ಕ್ಷೇತ್ರ ನಡೆದು ಬಂದ ದಾರಿಯ ಬಗ್ಗೆ ಪ್ರಸ್ತಾವಿಸಿದರು. ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಧನ್ಯವಾದ ಅರ್ಪಿಸಿದರು.

ಪ್ರಮುಖರಾದ ಕ್ಷೇತ್ರದ ಪ್ರಧಾನ ಅರ್ಚಕರಾದ ಶಿವಾನಂದ ಶಾಂತಿ, ನವೀನ್ ಸುವರ್ಣ, ಪ್ರವೀಣ್ ಪೂಜಾರಿ ಮೂಡಿಗೆರೆ, ಕೃಷ್ಣಪ್ಪ ಪೂಜಾರಿ, ಜಯಶ್ರೀ ಉಪ್ಪಿನಂಗಡಿ, ವಿಶ್ವನಾಥ ಪೂಜಾರಿ ಮೂಡಿಗೆರೆ, ನಾರಾಯಣ ಮಚ್ಚಿನ ಹಾಗೂ ನೂರಾರು ಕ್ಷೇತ್ರದ ಭಕ್ತರ ಉಪಸ್ಥಿತಿಯಲ್ಲಿ ನಡೆಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya
error: Content is protected !!