30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

ಬೆಳ್ತಂಗಡಿ: ಸ್ಯಾಕ್ಸೋಪೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದು ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ಕಾರ್ಯಕ್ರಮ ನೀಡುವುದಕ್ಕಾಗಿ ಮೂರನೇ ಬಾರಿಗೆ ಅಮೇರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಸುಜ್ಞಾನ ರಿಲಿಜಿಯಸ್‌ ಎಂಡ್ ಚಾರಿಟೇಬಲ್ ಫೌಂಡೇಶನ್ ಅರಿಝೋನಾ ಟೆಂಪಿ ಫೀನಿಕ್ಸ್ ಇಲ್ಲಿನ ಶ್ರೀ ವೆಂಕಟಕೃಷ್ಣ ದೇವಾಲಯದಲ್ಲಿ ಅ.28 ರಿಂದ ನ.4 ರ ವರೆಗೆ ನಡೆಯುವ ‘ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಅವರು ಸಾಂಪ್ರದಾಯಿಕ ವಾದನ ನಡೆಸಿಕೊಡಲು ಭಾರತದಿಂದ ವಿಶೇಷ ಆಹ್ವಾನಿತರಾಗಿದ್ದಾರೆ.

ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಕಲಾವಿದರಾಗಿದ್ದು ಕಳೆದ 27 ವರ್ಷಗಳಿಂದ ಮುಂಬೈ, ಚೆನ್ನೈ, ದುಬಾಯಿ ಸಹಿತ ಹಲವು ರಾಜ್ಯಗಳಲ್ಲಿ ತಮ್ಮ ಪ್ರಬುದ್ದ ಕಲಾಗಾರಿಕೆ ಪ್ರದರ್ಶಿಸಿದ್ದಾರೆ. ಈ ಹಿಂದೆಯೂ ಅವರು ಎರಡು ಬಾರಿ ಅಮೆರಿಕಾದಲ್ಲಿ ಯಶಸ್ವಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಬೆಂಗಳೂರು ದೂರದರ್ಶನದ ದಕ್ಷಿಣ ವಲಯ ಸಂಗೀತ ಕಾರ್ಯಕ್ರಮ, ಕೇಂದ್ರ ಸರಕಾರದ ಪ್ರಸಾರ ಭಾರತಿಯವರ ಪ್ರತಿಷ್ಠಿತ ಆಕಾಶವಾಣಿ ಸಂಗೀತ ಸಮ್ಮೇಳನ, ದೂರದರ್ಶನದ ‘ಪುದು ಗೈ ಇಸೈ ಮಾಲೈ’ ಕಾರ್ಯಕ್ರಮ ಸೇರಿದಂತೆ ಅನೇಕ ರಾಷ್ಟ್ರ ಮಟ್ಟದ ಕಾರ್ಯಕ್ರಮಗಳನ್ನು ನೀಡಿರುವ ಅನುಭವಿಯಾಗಿದ್ದಾರೆ. ಪ್ರಸ್ತುತ ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಖ್ಯ ವಾದ್ಯ ವಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!