September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

ಪೆರಿಂಜೆ: ಶಿಕ್ಷಣವೆಂದರೆ ಪುಸ್ತಕದ ಹಾಗೂ ಮಾಹಿತಿಗಳ ಸಂಗ್ರಹವಲ್ಲ. ಶಿಕ್ಷಣದೊಂದಿಗೆ ಅನುಭವ ಹಾಗೂ ಶಕ್ತಿಗೆ ಇಂತಹ ಶಿಬಿರಗಳು ಸಹಾಯ ಮಾಡುತ್ತವೆ. ಅಂತಹ ಒಳ್ಳೆಯ ಅನುಭವ ಹಾಗೂ ಶಕ್ತಿ ಬಳಸಿ ಸಮಾಜ ಹಾಗೂ ದೇಶಕ್ಕಾಗಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು.

ಇವರು ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ನಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು.

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಸಮಾರೋಪ ಭಾಷಣ ಮಾಡಿದರು. ಎನ್ನೆಸ್ಸೆಸ್ ನಾಯಕ ಸುದರ್ಶನ್ ನಾಯಕ್ ವರದಿ ವಾಚನ ಮಾಡಿದರು. ನಾಯಕಿ ದಕ್ಷಾ ಹಾಗೂ ಸ್ವಯಂ ಸೇವಕ ಬೊರೇಶ್ ಶಿಬಿರಾನುಭವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಿಬಿರ ಸಮಿತಿಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು ಹಾಗೂ ಸಹಾಯಕರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಶಿಬಿರ ಸಮಿತಿಯ ಅಧ್ಯಕ್ಷರಾದ ವಿಕಾಸ್ ಜೈನ್ , ಕಾರ್ಯದರ್ಶಿ ವಿದ್ಯಾನಂದ ಜೈನ್ , ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ , ಪೆರಿಂಜೆ ಗುತ್ತಿನ ಜಯರಾಜ ಕಂಬಳಿ , ದ.ಕ ಕೃ. ಅ. ಸಹಕಾರಿ ಸಂಘದ ನಿರ್ದೇಶಕರಾದ ಎನ್. ಸೀತಾರಾಮ ರೈ , ಉದ್ಯಮಿಗಳಾದ ಕೆ. ಭಾಸ್ಕರ ಪೈ ಹಾಗೂ ವಿಶ್ವಾಸ್ ಜೈನ್ , ಮುಖ್ಯೋಪಾಧ್ಯಾಯ ಮುಕುಂದಚಂದ್ರ ಉಪಸ್ಥಿತರಿದ್ದು ವಿದ್ಯಾರ್ಥಿ ಸ್ವಯಂ ಸೇವಕರಿಗೆ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು.

ಎನ್ನೆಸ್ಸೆಸ್ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಸ್ವಾಗತಿಸಿದರು. ಪಲ್ಲವಿ ಬಹುಮಾನ ಪಟ್ಟಿ ವಾಚಿಸಿದರು. ಶಿಬಿರ ಸಮಿತಿಯ ಅಧ್ಯಕ್ಷರಾದ ವಿಕಾಸ್ ಜೈನ್ ಅವರು ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸಾಕ್ಷಿ ನಿರೂಪಿಸಿ , ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಧನ್ಯವಾದ ಅರ್ಪಿಸಿದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
error: Content is protected !!