September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ಶಿಬಿರದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅನಂತೋಡಿ ಶ್ರಿ ಅನಂತಪದ್ಮನಾಭ ದೇವಸ್ಥಾನದ ಅಧ್ಯಕ್ಷರು, ನೋಟರಿ, ನ್ಯಾಯವಾದಿಗಳೂ ಆಗಿರುವ ಶ್ರೀನಿವಾಸ ಗೌಡರವರು ಶ್ರಮದಾನ ಕಾರ್ಯಕ್ರಮವನ್ನು ಗುದ್ದಲಿ ಪೂಜೆಯೊಂದಿಗೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಶಿಬಿರದ ಮೂಲಕ ಜೀವನ ಕೌಶಲ ಮತ್ತು ಮೌಲ್ಯಗಳನ್ನು ಅರಿತುಕೊಂಡು ಬದುಕಿನ ಅನುಭವಗಳನ್ನು ಪಡಕೂಳ್ಳಬೇಕು. ಪರಸ್ಪರ ಸಹಕಾರ ಹೊದಾಣಿಕೆಯೊಂದಿಗೆ ಶಿಸ್ತುಬದ್ಧ ಜೀವನ ಕ್ರಮದ ಕಲಿಕೆ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಮೂಲಕ ಸಾನ್ಯವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅತಿಥಿಗಳಾದ ಬೆಳಾಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಸಂಜೀವ ಗೌಡ ಮಂಡಾಲು, ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಶುಭಹಾರೈಸಿದರು. ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪಯೋಜನಾಧಿಕಾರಿಗಳಾದ ಲೋಹಿತ್ ಎಸ್ ರವರು ಅತಿಥಿಗಳನ್ನು ಗೌರವಿಸಿದರು.

ಶಿಬಿರಾರ್ಥಿಗಳಾದ ಶ್ರೀಲತಾ ಸ್ವಾಗತಿಸಿ, ಪ್ರಕ್ಷಿತ್ ವಂದಿಸಿದರು, ದೀಪಿಕಾ ಕಾರ್ಯಕ್ರಮ ನಿರೂಪಿಸಿದರು. ಏಳು ದಿನಗಳಲ್ಲಿ ಸ್ವಚ್ಚತಾ ಆಂದೋಲನ, ಬೃಹತ್ ಉಚಿತ ವೈದ್ಯಕೀಯ ಶಿಬಿರ, ಶಾಲಾವರಣ ಶುಚಿತ್ವ, ಶಾಲಾ ಮಕ್ಕಳಿಗೆ ಶೈಕ್ಷಣಿಕ ಔದ್ಯೋಗಿಕ ಮಾಹಿತಿ, ಸಾಂಸ್ಕೃತಿಕ ಕಾರ್ಯಕ್ರಮ ಮುಂತಾದ ವೈವಿಧ್ಯಮಯ ಚಟುವಟಿಕೆಗಳು ಆಯೋಜನೆಗೊಂಡಿವೆ.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
error: Content is protected !!