26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ.

ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಅಂತಿಮ‌ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ‌ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.‌ ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಪ್ರಕಟಿಸಿದರು.

ಎಸ್ಸೆಸ್ಸೆಫ್ ಸಂಘಟನೆಯಲ್ಲಿ ಕಾರ್ಕಳ ಡಿವಿಷನ್ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿದ್ದರು. ಪ್ರಸ್ತುತ ಎಸ್‌ವೈಎಸ್ ಸ್ವಯಂ ಸೇವಾ ಸಂಘಟನೆ “ಟೀಮ್ ಹಿಸಾಬಾ” ಇದರ ಕ್ಯಾಪ್ಟನ್ ಆಗಿದ್ದರು. ಹಲವೆಡೆ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು ಎರಡು ವಾರಗಳ ಹಿಂದಷ್ಟೇ ವೇಣೂರಿನ ಮದರಸಕ್ಕೆ ಕರ್ತವ್ಯಕ್ಕೆ ಸೇರಿದ್ದರು. ಕಾರ್ಕಳದ ಅಜೆಕಾರು ಶಿರ್ಲಾಲಿನಲ್ಲಿ ಕರ್ತವ್ಯ ದಲ್ಲಿದ್ದ ವೇಳೆ ಅಲ್ಲಿ ಮಸೀದಿ ನಿರ್ಮಾಣವಾಗುವಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು.
ಬುರ್ದಾ ಸಂಘಟನೆ, ಮಕ್ಕಳ ಪ್ರತಿಭಾ ಕಾರ್ಯಕ್ರಮಗಳ ತೀರ್ಪುಗಾರಿಕೆ, ಮದ್ಹ್ ಹಾಡುಗಾರರಾಗಿ, ಪ್ರಿಂಟಿಂಗ್, ವಿನ್ಯಾಸ, ಪ್ರತಿಭಾ ವೇದಿಕೆ, ಮೀಲಾದ್ ವೇದಿಕೆ ವಿನ್ಯಾಸ, ಮಸೀದಿ ಮದರಸಗಳಲ್ಲಿ ಸಾಮೂಹಿಕ ಅಡುಗೆ ತಯಾರಿಕೆ, ಸುನ್ನೀ ಸಂಘಟನೆಗಳು ಹಾಗೂ ಮುಅಲ್ಲಿಮ್ ಸಂಘಟನೆಗಳ ಕಾರ್ಯಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಅರ್ಹ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕಾಗಿ ಸಹಾಯಧನ ಸಂಗ್ರಹಿಸಿ ನೀಡುವುದು ಹಾಗೂ ಝಿಯಾರತ್ ಟೂರ್ ಗಳನ್ನು ಸಂಘಟಿಸುವುದು ಹೀಗೆ ಎಲ್ಲಾ ರೀತಿಯಿಂದ ಜನರ ಮೆಚ್ಚುಗೆ ಗಳಿಸಿದ್ದರು.


ಮೃತರು ತಾಯಿ ನೆಫೀಸಮ್ಮ, ಪತ್ನಿ ರಂಳತ್, ಮೂವರು ಹೆಣ್ಣು ಮಕ್ಕಳಾದ ಮಾಶಿತಾ, ಅನ್ಸೀರಾ ಮತ್ತು ಬಿಶಾರಾ, ಸಹೋದರಾದ ಅಬ್ಬಾಸ್, ಇಸ್ಮಾಯಿಲ್ ಮತ್ತು ಹುಸೈನ್ ಸ‌ಅದಿ, ಸಹೋದರಿ ಬೀಫಾತಿಮಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya
error: Content is protected !!