ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸುಲ್ಕೆರಿಯ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ. 10 ಲಕ್ಷ ಮೊತ್ತದ ಡಿಡಿಯ ವಿತರಣೆಯನ್ನು ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ ಎಲ್ ಹೆಚ್ ಮಂಜುನಾಥ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಸದಿಯ ಜೀರ್ಣೊದ್ಧಾರ ಸಮಿತಿಯ ಪ್ರಮುಖರಾದ ಜಗದೀಶ್ ಹೆಗ್ಡೆ ನಾವರ ಗುತ್ತು, ಅಜಿತ್ ಜೈನ್ ಬೊನ್ನಿಜೆ ,ಜನಜಾಗೃತಿ ನಾರಾವಿ ವಲಯಾಧ್ಯಕ್ಷರಾದ ನಿತ್ಯಾನಂದ ನಾವರ, ಉದ್ಯಮಿ ಸುಂದರ್ ಶೆಟ್ಟಿ ಸುಲ್ಕೇರಿ, ಯೋಜನಾಧಿಕಾರಿ ದಯಾನಂದ ಪೂಜಾರಿ ವಲಯ ಮೇಲ್ವಿಚಾರಕರಾದ ದಮಯಂತಿ, ವಲಯದ ಸೇವಾಪ್ರತಿನಿಧಿ ಗಳು, ಊರ ಪ್ರಮುಖರು ಹಾಗೂ ಬಸದಿಗೆ ಸಂಭದಿಸಿದ ಜೈನ ಭಾಂಧವರು ಉಪಸ್ಥಿತರಿದ್ದರು.

Leave a Comment

error: Content is protected !!