July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ತಗಡು ಶೀಟ್‌ ಛಾವಣಿಯ ಶೆಡ್‌ ನ ಒಳಗೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಒಬ್ಬ ವ್ಯಕ್ತಿಯು ಪರಾರಿಯಾಗಿದ್ದು, ಉಳಿದ 37 ಮಂದಿ ಆರೋಪಿಗಳನ್ನು ಮತ್ತು ಸ್ಥಳದಲ್ಲಿ ಇದ್ದ ಆಟಕ್ಕೆ ಉಪಯೋಗಿಸಿದ ಇಸ್ಪಿಟ್ ಎಲೆಗಳು, ನಗದು ರೂ 54,510/- , ಉಪಯೋಗಿಸಿದ ಪಿಠೋಪಕರಣಗಳು, 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ನ್ಯಾಯಾಲಯದ ಅನುಮತಿ ಪಡೆದು ಅ. 16 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ: 91/2023 ಕಲಂ: ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya
error: Content is protected !!