25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ತಗಡು ಶೀಟ್‌ ಛಾವಣಿಯ ಶೆಡ್‌ ನ ಒಳಗೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಒಬ್ಬ ವ್ಯಕ್ತಿಯು ಪರಾರಿಯಾಗಿದ್ದು, ಉಳಿದ 37 ಮಂದಿ ಆರೋಪಿಗಳನ್ನು ಮತ್ತು ಸ್ಥಳದಲ್ಲಿ ಇದ್ದ ಆಟಕ್ಕೆ ಉಪಯೋಗಿಸಿದ ಇಸ್ಪಿಟ್ ಎಲೆಗಳು, ನಗದು ರೂ 54,510/- , ಉಪಯೋಗಿಸಿದ ಪಿಠೋಪಕರಣಗಳು, 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ನ್ಯಾಯಾಲಯದ ಅನುಮತಿ ಪಡೆದು ಅ. 16 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ: 91/2023 ಕಲಂ: ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya
error: Content is protected !!