22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

ಬೆಳ್ತಂಗಡಿ: ಸ. ಉ. ಹಿ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನಡೆಯುತ್ತಿರುವ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ., ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ ನೀಡಿ ಶಿಬಿರದ ಬಗ್ಗೆ ಶಿಬಿರಾರ್ಥಿಗಳ ಅಭಿಪ್ರಾಯದ ಜೊತೆಗೆ ಅವರ ಎನ್ಎಸ್ಎಸ್ ಜೀವನದ ನಿದರ್ಶನಗಳ ಮೂಲಕ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಓಡಿಲ್ನಾಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರಾಜ್ ಪ್ರಕಾಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಸುಮಿತ್ ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಘಟಕದ ವತಿಯಿಂದ ಸವಿತಾ ಎರ್ಮಾಳ್ ಅವರನ್ನು ಗೌರವಿಸಿದರು.

ಶಿಭಿರಾಧಿಕಾರಿ ಶಂಕರ್ ರಾವ್ ಸ್ವಾಗತಿಸಿ ಸಹ ಶಿಬಿರಾಧಿಕಾರಿ ಕುಮಾರಿ ಕಾಮಾಕ್ಷಿ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!