38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

ಬೆಳ್ತಂಗಡಿ: ಸ್ಯಾಕ್ಸೋಪೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದು ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ಕಾರ್ಯಕ್ರಮ ನೀಡುವುದಕ್ಕಾಗಿ ಮೂರನೇ ಬಾರಿಗೆ ಅಮೇರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಸುಜ್ಞಾನ ರಿಲಿಜಿಯಸ್‌ ಎಂಡ್ ಚಾರಿಟೇಬಲ್ ಫೌಂಡೇಶನ್ ಅರಿಝೋನಾ ಟೆಂಪಿ ಫೀನಿಕ್ಸ್ ಇಲ್ಲಿನ ಶ್ರೀ ವೆಂಕಟಕೃಷ್ಣ ದೇವಾಲಯದಲ್ಲಿ ಅ.28 ರಿಂದ ನ.4 ರ ವರೆಗೆ ನಡೆಯುವ ‘ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಅವರು ಸಾಂಪ್ರದಾಯಿಕ ವಾದನ ನಡೆಸಿಕೊಡಲು ಭಾರತದಿಂದ ವಿಶೇಷ ಆಹ್ವಾನಿತರಾಗಿದ್ದಾರೆ.

ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಕಲಾವಿದರಾಗಿದ್ದು ಕಳೆದ 27 ವರ್ಷಗಳಿಂದ ಮುಂಬೈ, ಚೆನ್ನೈ, ದುಬಾಯಿ ಸಹಿತ ಹಲವು ರಾಜ್ಯಗಳಲ್ಲಿ ತಮ್ಮ ಪ್ರಬುದ್ದ ಕಲಾಗಾರಿಕೆ ಪ್ರದರ್ಶಿಸಿದ್ದಾರೆ. ಈ ಹಿಂದೆಯೂ ಅವರು ಎರಡು ಬಾರಿ ಅಮೆರಿಕಾದಲ್ಲಿ ಯಶಸ್ವಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಬೆಂಗಳೂರು ದೂರದರ್ಶನದ ದಕ್ಷಿಣ ವಲಯ ಸಂಗೀತ ಕಾರ್ಯಕ್ರಮ, ಕೇಂದ್ರ ಸರಕಾರದ ಪ್ರಸಾರ ಭಾರತಿಯವರ ಪ್ರತಿಷ್ಠಿತ ಆಕಾಶವಾಣಿ ಸಂಗೀತ ಸಮ್ಮೇಳನ, ದೂರದರ್ಶನದ ‘ಪುದು ಗೈ ಇಸೈ ಮಾಲೈ’ ಕಾರ್ಯಕ್ರಮ ಸೇರಿದಂತೆ ಅನೇಕ ರಾಷ್ಟ್ರ ಮಟ್ಟದ ಕಾರ್ಯಕ್ರಮಗಳನ್ನು ನೀಡಿರುವ ಅನುಭವಿಯಾಗಿದ್ದಾರೆ. ಪ್ರಸ್ತುತ ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಖ್ಯ ವಾದ್ಯ ವಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya
error: Content is protected !!