25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

ಬೆಳ್ತಂಗಡಿ: ಸ್ಯಾಕ್ಸೋಪೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದು ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ಕಾರ್ಯಕ್ರಮ ನೀಡುವುದಕ್ಕಾಗಿ ಮೂರನೇ ಬಾರಿಗೆ ಅಮೇರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಸುಜ್ಞಾನ ರಿಲಿಜಿಯಸ್‌ ಎಂಡ್ ಚಾರಿಟೇಬಲ್ ಫೌಂಡೇಶನ್ ಅರಿಝೋನಾ ಟೆಂಪಿ ಫೀನಿಕ್ಸ್ ಇಲ್ಲಿನ ಶ್ರೀ ವೆಂಕಟಕೃಷ್ಣ ದೇವಾಲಯದಲ್ಲಿ ಅ.28 ರಿಂದ ನ.4 ರ ವರೆಗೆ ನಡೆಯುವ ‘ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಅವರು ಸಾಂಪ್ರದಾಯಿಕ ವಾದನ ನಡೆಸಿಕೊಡಲು ಭಾರತದಿಂದ ವಿಶೇಷ ಆಹ್ವಾನಿತರಾಗಿದ್ದಾರೆ.

ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗ ಅವರು ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಕಲಾವಿದರಾಗಿದ್ದು ಕಳೆದ 27 ವರ್ಷಗಳಿಂದ ಮುಂಬೈ, ಚೆನ್ನೈ, ದುಬಾಯಿ ಸಹಿತ ಹಲವು ರಾಜ್ಯಗಳಲ್ಲಿ ತಮ್ಮ ಪ್ರಬುದ್ದ ಕಲಾಗಾರಿಕೆ ಪ್ರದರ್ಶಿಸಿದ್ದಾರೆ. ಈ ಹಿಂದೆಯೂ ಅವರು ಎರಡು ಬಾರಿ ಅಮೆರಿಕಾದಲ್ಲಿ ಯಶಸ್ವಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಬೆಂಗಳೂರು ದೂರದರ್ಶನದ ದಕ್ಷಿಣ ವಲಯ ಸಂಗೀತ ಕಾರ್ಯಕ್ರಮ, ಕೇಂದ್ರ ಸರಕಾರದ ಪ್ರಸಾರ ಭಾರತಿಯವರ ಪ್ರತಿಷ್ಠಿತ ಆಕಾಶವಾಣಿ ಸಂಗೀತ ಸಮ್ಮೇಳನ, ದೂರದರ್ಶನದ ‘ಪುದು ಗೈ ಇಸೈ ಮಾಲೈ’ ಕಾರ್ಯಕ್ರಮ ಸೇರಿದಂತೆ ಅನೇಕ ರಾಷ್ಟ್ರ ಮಟ್ಟದ ಕಾರ್ಯಕ್ರಮಗಳನ್ನು ನೀಡಿರುವ ಅನುಭವಿಯಾಗಿದ್ದಾರೆ. ಪ್ರಸ್ತುತ ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮುಖ್ಯ ವಾದ್ಯ ವಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya
error: Content is protected !!