37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya
error: Content is protected !!