25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
error: Content is protected !!