September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಜೈನ ಮಠದ ಪರಮಪೂಜ್ಯ ಡಾ| ಚಾರುಕೀರ್ತಿ ಸ್ವಾಮೀಜಿ ಹಾಗೂ ಶ್ರೀ ಕನಕಗಿರಿ ಪರಮಪೂಜ್ಯ ಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನ ನೆರವೇರಿಸಿದರು.
ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಿದರು.

ಅಧ್ಯಕ್ಷತೆಯನ್ನು ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ ಸುಧಾಕರ್ ವಹಿಸಿದರು.
ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಕೋಲಾರ ಸಂಸದ ಮುನಿಯಪ್ಪ ಸ್ವಾಮಿ, ವಿಧಾನಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಎಸ್.ಎಲ್ ಭೋಜೆ ಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಹಾಗೂ ದಾನಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಕು| ಸ್ತುತಿ ಎಸ್ ಕೊಂಬ ಪ್ರಾರ್ಥಿಸಿ, ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿ ಉಪಾಧ್ಯಕ್ಷ ನವೀನ್ ಚಂದ್ ಬಲ್ಲಾಳ್ ವಂದಿಸಿದರು.

Related posts

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya
error: Content is protected !!