25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ.

ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಅಂತಿಮ‌ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ‌ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.‌ ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಪ್ರಕಟಿಸಿದರು.

ಎಸ್ಸೆಸ್ಸೆಫ್ ಸಂಘಟನೆಯಲ್ಲಿ ಕಾರ್ಕಳ ಡಿವಿಷನ್ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿದ್ದರು. ಪ್ರಸ್ತುತ ಎಸ್‌ವೈಎಸ್ ಸ್ವಯಂ ಸೇವಾ ಸಂಘಟನೆ “ಟೀಮ್ ಹಿಸಾಬಾ” ಇದರ ಕ್ಯಾಪ್ಟನ್ ಆಗಿದ್ದರು. ಹಲವೆಡೆ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು ಎರಡು ವಾರಗಳ ಹಿಂದಷ್ಟೇ ವೇಣೂರಿನ ಮದರಸಕ್ಕೆ ಕರ್ತವ್ಯಕ್ಕೆ ಸೇರಿದ್ದರು. ಕಾರ್ಕಳದ ಅಜೆಕಾರು ಶಿರ್ಲಾಲಿನಲ್ಲಿ ಕರ್ತವ್ಯ ದಲ್ಲಿದ್ದ ವೇಳೆ ಅಲ್ಲಿ ಮಸೀದಿ ನಿರ್ಮಾಣವಾಗುವಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು.
ಬುರ್ದಾ ಸಂಘಟನೆ, ಮಕ್ಕಳ ಪ್ರತಿಭಾ ಕಾರ್ಯಕ್ರಮಗಳ ತೀರ್ಪುಗಾರಿಕೆ, ಮದ್ಹ್ ಹಾಡುಗಾರರಾಗಿ, ಪ್ರಿಂಟಿಂಗ್, ವಿನ್ಯಾಸ, ಪ್ರತಿಭಾ ವೇದಿಕೆ, ಮೀಲಾದ್ ವೇದಿಕೆ ವಿನ್ಯಾಸ, ಮಸೀದಿ ಮದರಸಗಳಲ್ಲಿ ಸಾಮೂಹಿಕ ಅಡುಗೆ ತಯಾರಿಕೆ, ಸುನ್ನೀ ಸಂಘಟನೆಗಳು ಹಾಗೂ ಮುಅಲ್ಲಿಮ್ ಸಂಘಟನೆಗಳ ಕಾರ್ಯಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಅರ್ಹ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕಾಗಿ ಸಹಾಯಧನ ಸಂಗ್ರಹಿಸಿ ನೀಡುವುದು ಹಾಗೂ ಝಿಯಾರತ್ ಟೂರ್ ಗಳನ್ನು ಸಂಘಟಿಸುವುದು ಹೀಗೆ ಎಲ್ಲಾ ರೀತಿಯಿಂದ ಜನರ ಮೆಚ್ಚುಗೆ ಗಳಿಸಿದ್ದರು.


ಮೃತರು ತಾಯಿ ನೆಫೀಸಮ್ಮ, ಪತ್ನಿ ರಂಳತ್, ಮೂವರು ಹೆಣ್ಣು ಮಕ್ಕಳಾದ ಮಾಶಿತಾ, ಅನ್ಸೀರಾ ಮತ್ತು ಬಿಶಾರಾ, ಸಹೋದರಾದ ಅಬ್ಬಾಸ್, ಇಸ್ಮಾಯಿಲ್ ಮತ್ತು ಹುಸೈನ್ ಸ‌ಅದಿ, ಸಹೋದರಿ ಬೀಫಾತಿಮಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya
error: Content is protected !!