22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ:ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ,ಟೆಂಪೋ ಮಗುಚಿ ಬಿದ್ದು,ರಸ್ತೆ ತಡೆ ಉಂಟಾಗಿ ಚಾರ್ಮಾಡಿ ಘಾಟಿ ಭಾಗದಲ್ಲಿ 3ತಾಸಿಗಿಂತ ಅಧಿಕ ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸಣ್ಣ ವಾಹನಗಳು ಸಂಚರಿಸುವಷ್ಟು ಜಾಗ ಇದ್ದರು ಅಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.

Related posts

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!