September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ : ‘ಹಳ್ಳಿಯ ರೈತರ ಮಕ್ಕಳು ಆಡುತ್ತಿದ್ದ ಕಬಡ್ಡಿ ಕ್ರೀಡೆ ಇಂದು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಬೆಳೆದಿದೆ. ಹಾಗಾಗಿ ಇಂದು ಗ್ರಾಮೀಣ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಿ ಮೂಡಿಬರಲು ಸಾಧ್ಯವಾಗಿದೆ’ ಎಂದು ಮಾಜಿ ಶಾಸಕ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.

ಅವರು ಅ.15ರಂದು ತಾಲ್ಲೂಕಿನ ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು – ಕರಂಬಾರು ಇದರ ಆಶ್ರಯದಲ್ಲಿ ಬ್ರಹ್ಮ ಬೈದರ್ಕಳ ಗರಡಿ ಸಮಿತಿ ಶಿರ್ಲಾಲು ಕರಂಬಾರು, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ , ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಶಿರ್ಲಾಲು ಕರಂಬಾರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಯುವವಾಹಿನಿ ಸೇವಾ ಚಟುವಟಿಕೆಗಳ ಸಹಾಯಾರ್ಥ 55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಶಿರ್ಲಾಲು – ಕರಂಬಾರು ಯುವವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಶಿರ್ಲಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಎಂ ಶೆಟ್ಟಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್,
ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಅರ್ಚಕ ಸೂರ್ಯನಾರಾಯಣ ರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಸಾಲಿಯಾನ್ ಪುದ್ದರಬೈಲ್, ಯುವವಾಹಿನಿ ಕೇಂದ್ರ ಸಮಿತಿ ಕೋಶಾಧಿಕಾರಿ ಪ್ರಸಾದ್ ಎಂ.ಕೆ. ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಉಮೇಶ್ ಕಂಬಳದಡ್ಡ ಇದ್ದರು.

ಕರಂಬಾರು ಗ್ರಾಮದ ಕಮಲ ಎಂಬವರಿಗೆ ಆರೋಗ್ಯ ನಿಧಿ ಹಸ್ತಾಂತರಿಸಲಾಯಿತು.

ಶ್ರೇಯ ಮತ್ತು ತೇಜಸ್ವಿ ಪ್ರಾರ್ಥಿಸಿದರು. ಯುವವಾಹಿನಿ ಸಂಚಲನ ಸಮಿತಿ ನಿರ್ದೇಶಕರಾದ ದಿನೇಶ್ ಕರ್ದೊಟ್ಟು ಸ್ವಾಗತಿಸಿ, ಪ್ರಸಾದ್ ಕರಂಬಾರು ಕಾರ್ಯಕ್ರಮ ನಿರೂಪಿಸಿದರು. ಸಂಚಲನ ಸಮಿತಿಯ ಮಾಜಿ ಅಧ್ಯಕ್ಷ ರಂಜಿತ್ ಅಜಿರೋಳಿ ವಂದಿಸಿದರು.

Related posts

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya
error: Content is protected !!