ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಪೆರಿಂಜೆ: ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಪಡ್ಡಂದಡ್ಕ ಇಲ್ಲಿ ನವರಾತ್ರಿಯ ಪ್ರಾರಂಭದ ದಿನದಲ್ಲಿ ಕುಣಿತ ಭಜನಾ ಮಂಡಳಿಗೆ ಚಾಲನೆ ನೀಡಲಾಯಿತು.

ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಸಂದೇಶ್‌ ಮದ್ದಡ್ಕ ರವರು ತರಬೇತಿ ನೀಡಲಿದ್ದು, ಕಾರ್ಯಕ್ರಮವನ್ನು ಗಣ್ಯರ ಉಪಸ್ಥಿತಿಯಲ್ಲಿ ದೀಪಬೆಳಗಿಸಿ ಉದ್ಘಾಟನೆ ಮಾಡಲಾಯಿತು.

ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ಮಾತಾನಾಡಿದರು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ , ಭಜನಾ ಮಂಡಳಿ ಮಾಜಿ ಅಧ್ಯಕ್ಷ ಸಂಕಪ್ಪ ನಾಯ್ಕ್ , ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷ ಶಾಂತ ಕೃಷ್ಣಪ್ಪ , ವೇಣೂರು ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪ ಹಾಗೂ ಭಜನಾ ಸದಸ್ಯರು ಪೋಷಕರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು..

ಪ್ರತಿಭಾ ಸುಧೀರ್ ಭಂಡಾರಿ ನಿರೂಪಿಸಿ, ನಳಿನಾಕ್ಷಿ ಸ್ವಾಗತಿಸಿದರು. ಶಶಿಕಲಾ ಇವರು ಧನ್ಯವಾದವಿತ್ತರು.

Leave a Comment

error: Content is protected !!