April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

ಕೊಕ್ಕಡ: ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಟ್ರಸ್ಟ್ ಮತ್ತು ನವರಾತ್ರಿ ನಿರ್ವಹಣಾ ಸಮಿತಿ ಕಾವು ಕೌಕ್ರಾಡಿ ಇದರ ವತಿಯಿಂದ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು.

ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ನವರಾತ್ರಿ ಉತ್ಸವ ಆರಂಭಗೊಂಡಿತು. ಸಂಜೆ ಶ್ರೀ ದೇವರಿಗೆ ಸಮರ್ಪಣೆಗಾಗಿ ಮಾಡಲಾದ ರಜತ ಕವಚವನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ವಾಹನ ಜಾಥದ ಮೂಲಕ ಕಾವು ದೇವಸ್ಥಾನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರು ಮತ್ತು ಸರ್ವ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಸದಸ್ಯರು ನವರಾತ್ರಿ ನಿರ್ವಹಣಾ ಸಮಿತಿ, ಪವಿತ್ರಪಾಣಿ, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಜೈನ ಮುನಿಯ ವಿಚಾರದಲ್ಲ ರಾಜಕಾರಣಿಗಳ ಬುದ್ಧಿಜೀವಿಗಳ ಪ್ರಗತಿಪರರ ಜಾತ್ಯಾತೀತರ ತಾರತಮ್ಯ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
error: Content is protected !!