July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ತಗಡು ಶೀಟ್‌ ಛಾವಣಿಯ ಶೆಡ್‌ ನ ಒಳಗೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಒಬ್ಬ ವ್ಯಕ್ತಿಯು ಪರಾರಿಯಾಗಿದ್ದು, ಉಳಿದ 37 ಮಂದಿ ಆರೋಪಿಗಳನ್ನು ಮತ್ತು ಸ್ಥಳದಲ್ಲಿ ಇದ್ದ ಆಟಕ್ಕೆ ಉಪಯೋಗಿಸಿದ ಇಸ್ಪಿಟ್ ಎಲೆಗಳು, ನಗದು ರೂ 54,510/- , ಉಪಯೋಗಿಸಿದ ಪಿಠೋಪಕರಣಗಳು, 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ನ್ಯಾಯಾಲಯದ ಅನುಮತಿ ಪಡೆದು ಅ. 16 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ: 91/2023 ಕಲಂ: ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!