37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಘಟಕದ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಳೆಂಜ ಗ್ರಾಮದ ಶಿಬರಾಜೆ ನಿವಾಸಿ ಸಂತೋಷ್ ಕುಮಾರ್ ಜೈನ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಅಕ್ಷತ್ ರೈ ಅವರನ್ನು ಆರಿಸಲಾಯಿತು.

ಅ.15 ರಂದು ಶಿಬರಾಜೆ ಪಾದೆಯಲ್ಲಿನ ಗ್ರಾಮಾಭ್ಯದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್. ಪಿರೇರಾ ವಹಿಸಿದ್ದರು.

ಅಕ್ಷತ್ ಅವರು ಜೇಸಿ ವಾಣಿ ವಾಚಿಸಿದರು. ಜೆಸಿಂತಾ ಡಿ ಸೋಜ, ಜೋಸೆಫ್ ಪಿರೇರಾ, ಪಿ.ಟಿ. ಸೆಬಾಸ್ಟಿಯನ್, ಜಸ್ವಂತ್ ಪಿರೇರಾ ಮುಂತಾದ ಸದಸ್ಯರು ಶುಭ ಹಾರೈಸಿದರು.

ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್ ಅವರು ಚುನಾವಣೆಯನ್ನು ನಡೆಸಿಕೊಟ್ಟರು.

ನಿತ್ಯಾನಂದ ರೈ, ಬಾಲಕೃಷ್ಣ ದೇವಾಡಿಗ, ವಿನೋದ ಗೌಡ, ಸುಖಲತಾ ರೈ, ವಸಂತ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!