25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಶ್ರೀ ಧರ್ಮಸ್ಥಳ ಶಾಲೆಗಳ ಸಹಯೋಗದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟು ಗ್ರಾಮದ ಕೃಷಿಕ ರೈತ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ.ಉದ್ಘಾಟಿಸಿದರು.


ಸ್ಪರ್ಧಾತ್ಮಕ ಪರೀಕ್ಷೆಗಳ ಜಿಲ್ಲಾ ಮುಖ್ಯ ಸಂಯೋಜಕ ಎಲ್.ಎನ್.ಸುರೇಶ ಎಂ.ಎಸ್ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅಭಿವೃದ್ಧಿ ಅಧಿಕಾರಿ ಉಮೇಶ ಕೆ., ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್, ನಿರ್ದೇಶಕಿ ಧನಲಕ್ಷ್ಮೀ ಜನಾರ್ಧನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ, ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಪದ್ಮಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರಿಮಳ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ 153 ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya
error: Content is protected !!