25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

ಪೆರಿಂಜೆ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕಾರ್ಯಕ್ರಮವಾದ ” ನನ್ನ ಮಣ್ಣು ನನ್ನ ದೇಶ ” ಅಭಿಯಾನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಸಂದರ್ಭದಲ್ಲಿ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ ನಡೆಯಿತು.

ಇಲ್ಲಿನ ಹೊಸಂಗಡಿ ಪಂಚಾಯತ್ ನ ಗ್ರಾಮಾಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿಯವರು ಸ್ವಚ್ಛತೆಯ ಅರಿವು ಸಂದೇಶ ನೀಡುವುದರೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಿದರು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಹಾಗೂ ಶಿಬಿರ ಸಮಿತಿಯ ಕಾರ್ಯದರ್ಶಿ ವಿದ್ಯಾನಂದ ಜೈನ್ ಅವರ ಮಾರ್ಗದರ್ಶನದಲ್ಲಿ ರಾ.ಸೇ. ಯೋಜನೆಯ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಇವರ ನಾಯಕತ್ವದಲ್ಲಿ ಪೆರಿಂಜೆ ಗ್ರಾಮದಲ್ಲಿದ್ದ ಪ್ಲಾಸ್ಟಿಕ್ , ಒಣಕಸ, ಗಾಜಿನ ಚೂರುಗಳು ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿಗಾಗಿ ಹೊಸಂಗಡಿ ಪಂಚಾಯತ್ ವಶಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರು , ಸ್ಥಳೀಯರು , ಹಿರಿಯ ಎನ್ನೆಸ್ಸೆಸ್ ಸ್ವಯಂ ಸೇವಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya
error: Content is protected !!