23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ಶಿಬಿರದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅನಂತೋಡಿ ಶ್ರಿ ಅನಂತಪದ್ಮನಾಭ ದೇವಸ್ಥಾನದ ಅಧ್ಯಕ್ಷರು, ನೋಟರಿ, ನ್ಯಾಯವಾದಿಗಳೂ ಆಗಿರುವ ಶ್ರೀನಿವಾಸ ಗೌಡರವರು ಶ್ರಮದಾನ ಕಾರ್ಯಕ್ರಮವನ್ನು ಗುದ್ದಲಿ ಪೂಜೆಯೊಂದಿಗೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಶಿಬಿರದ ಮೂಲಕ ಜೀವನ ಕೌಶಲ ಮತ್ತು ಮೌಲ್ಯಗಳನ್ನು ಅರಿತುಕೊಂಡು ಬದುಕಿನ ಅನುಭವಗಳನ್ನು ಪಡಕೂಳ್ಳಬೇಕು. ಪರಸ್ಪರ ಸಹಕಾರ ಹೊದಾಣಿಕೆಯೊಂದಿಗೆ ಶಿಸ್ತುಬದ್ಧ ಜೀವನ ಕ್ರಮದ ಕಲಿಕೆ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಮೂಲಕ ಸಾನ್ಯವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅತಿಥಿಗಳಾದ ಬೆಳಾಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಸಂಜೀವ ಗೌಡ ಮಂಡಾಲು, ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಶುಭಹಾರೈಸಿದರು. ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪಯೋಜನಾಧಿಕಾರಿಗಳಾದ ಲೋಹಿತ್ ಎಸ್ ರವರು ಅತಿಥಿಗಳನ್ನು ಗೌರವಿಸಿದರು.

ಶಿಬಿರಾರ್ಥಿಗಳಾದ ಶ್ರೀಲತಾ ಸ್ವಾಗತಿಸಿ, ಪ್ರಕ್ಷಿತ್ ವಂದಿಸಿದರು, ದೀಪಿಕಾ ಕಾರ್ಯಕ್ರಮ ನಿರೂಪಿಸಿದರು. ಏಳು ದಿನಗಳಲ್ಲಿ ಸ್ವಚ್ಚತಾ ಆಂದೋಲನ, ಬೃಹತ್ ಉಚಿತ ವೈದ್ಯಕೀಯ ಶಿಬಿರ, ಶಾಲಾವರಣ ಶುಚಿತ್ವ, ಶಾಲಾ ಮಕ್ಕಳಿಗೆ ಶೈಕ್ಷಣಿಕ ಔದ್ಯೋಗಿಕ ಮಾಹಿತಿ, ಸಾಂಸ್ಕೃತಿಕ ಕಾರ್ಯಕ್ರಮ ಮುಂತಾದ ವೈವಿಧ್ಯಮಯ ಚಟುವಟಿಕೆಗಳು ಆಯೋಜನೆಗೊಂಡಿವೆ.

Related posts

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!