30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

ಬೆಳ್ತಂಗಡಿ; ಸುವರ್ಣ ವರ್ಷದ ಸಂಭ್ರಮದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ಮೇಲ್ಘಟಕದ ನಿರ್ದೇಶನಕ್ಕಾಗಿ ಸೇವೆ ಮಾಡದೆ ನಿಜವಾದ ಅರ್ಥದಲ್ಲಿ ಅರ್ಹರನ್ನು ಹುಡುಕಿ ಸೇವೆ ಮಾಡುತ್ತಿದೆ ಎಂದು ಲಯನ್ಸ್ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೋ ಹೇಳಿದರು.


ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ ಮಾಡಿದ ಅವರು ಸೇವಾ ಚಟುವಟಿಕೆಗಳನ್ನು ಮೆಚ್ಚಿದರು.
ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಿದ್ದು, ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವವನ್ನು ವಿಶೇಷ ರೀತಿಯಲ್ಲಿ ಸಂಘಟಿಸಲಾಗುವುದು. ಶಾಶ್ವತ ಯೋಜನೆ ಕೂಡ ಮಾಡಲಾಗುವುದು ಎಂದರು.


ವೇದಿಕೆಯಲ್ಲಿ ಪ್ರಾಂತ್ಯದ ವಿವಿಧ ಲಯನ್ಸ್ ಕ್ಲಬ್ ಗಳ ಅಧ್ಯಕ್ಷರುಗಳು, ವಲಯಾಧ್ಯಕ್ಷ ದಿನೇಶ್ ಎಂ.ಕೆ, ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಡಾ. ದೇವಿ ಪ್ರಸಾದ್ ಬೊಳ್ಮ ಉಪಸ್ಥಿತರಿದ್ದರು.
ಶಿಲ್ಪಾ ರಾವ್ ಪ್ರಾರ್ಥನೆ ಹಾಡಿದರು. ವಸಂತ ಶೆಟ್ಟಿ ವೇದಿಕೆಗೆ ಆಹ್ವಾನಿಸಿದರು. ದತ್ತಾತ್ರೇಯ ಗೊಲ್ಲ ಧ್ವಜವಂದನೆ ನಡೆಸಿದರು. ನೀತಿ‌ಸಂಹಿತಿಯನ್ನು ಪ್ರಭಾಕರ ಗೌಡ ಬೊಳ್ಮ ವಾಚಿಸಿದರು.ಘಟಕದ ವರದಿಯನ್ನು ಕಾರ್ಯದರ್ಶಿ ಅನಂತಕೃಷ್ಣ ವಾಚಿಸಿ ಪ್ರಾಂತ್ಯಾಧ್ಯಕ್ಷ ರಿಗೆ ಹಸ್ತಾಂತರಿಸಿದರು. ಸೇವಾ ಚಟುವಟಿಕೆಗಳ ವಿವರವನ್ನು ಸುರೇಶ್ ಶೆಟ್ಟಿ, ಧರಣೇಂದ್ರ ಕೆ ಜೈನ್ ಮಂಡಿಸಿದರು. ಪ್ರಾಂತ್ಯಾಧ್ಯಕ್ಷರ ಪರಿಚಯವನ್ನು ಕೃಷ್ಣ ಆಚಾರ್ ನಡೆಸಿದರು.

ಸಮಾರಂಭದಕ್ಕೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ.‌ಮೆಲ್ವಿನ್ ಡಿಸೋಜಾ,‌ ಕಾರ್ಯದರ್ಶಿ ಓಸ್ವಾಲ್ಡ್ ಅಚ್ಚರಿಯ ಭೇಟಿ ನೀಡಿ ಶುಭ ಕೋರಿದರು. ಕೋಶಾಧಿಕಾರಿ ಸುಭಾಶಿಣಿ ಧನ್ಯವಾದ ಸಮರ್ಪಿಸಿದರು. ದಿನದ ಸೇವಾ ಚಟುವಟಿಕೆಯಂಗವಾಗಿ ಅರ್ಹ ಕುಟುಂಬಗಳಿಗೆ ಅಕ್ಕಿ‌ ವಿತರಿಸಲಾಯಿತು. ವಿದ್ಯಾರ್ಥಿನಿಯೊಬ್ಬರಿಗೆ ಶೈಕ್ಷಣಿಕ ನಿಧಿ ಹಸ್ತಾಂತರಿಸಲಾಯಿತು.
.‌

Related posts

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!