30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ.

ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಅಂತಿಮ‌ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ‌ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.‌ ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಪ್ರಕಟಿಸಿದರು.

ಎಸ್ಸೆಸ್ಸೆಫ್ ಸಂಘಟನೆಯಲ್ಲಿ ಕಾರ್ಕಳ ಡಿವಿಷನ್ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿದ್ದರು. ಪ್ರಸ್ತುತ ಎಸ್‌ವೈಎಸ್ ಸ್ವಯಂ ಸೇವಾ ಸಂಘಟನೆ “ಟೀಮ್ ಹಿಸಾಬಾ” ಇದರ ಕ್ಯಾಪ್ಟನ್ ಆಗಿದ್ದರು. ಹಲವೆಡೆ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು ಎರಡು ವಾರಗಳ ಹಿಂದಷ್ಟೇ ವೇಣೂರಿನ ಮದರಸಕ್ಕೆ ಕರ್ತವ್ಯಕ್ಕೆ ಸೇರಿದ್ದರು. ಕಾರ್ಕಳದ ಅಜೆಕಾರು ಶಿರ್ಲಾಲಿನಲ್ಲಿ ಕರ್ತವ್ಯ ದಲ್ಲಿದ್ದ ವೇಳೆ ಅಲ್ಲಿ ಮಸೀದಿ ನಿರ್ಮಾಣವಾಗುವಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು.
ಬುರ್ದಾ ಸಂಘಟನೆ, ಮಕ್ಕಳ ಪ್ರತಿಭಾ ಕಾರ್ಯಕ್ರಮಗಳ ತೀರ್ಪುಗಾರಿಕೆ, ಮದ್ಹ್ ಹಾಡುಗಾರರಾಗಿ, ಪ್ರಿಂಟಿಂಗ್, ವಿನ್ಯಾಸ, ಪ್ರತಿಭಾ ವೇದಿಕೆ, ಮೀಲಾದ್ ವೇದಿಕೆ ವಿನ್ಯಾಸ, ಮಸೀದಿ ಮದರಸಗಳಲ್ಲಿ ಸಾಮೂಹಿಕ ಅಡುಗೆ ತಯಾರಿಕೆ, ಸುನ್ನೀ ಸಂಘಟನೆಗಳು ಹಾಗೂ ಮುಅಲ್ಲಿಮ್ ಸಂಘಟನೆಗಳ ಕಾರ್ಯಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಅರ್ಹ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕಾಗಿ ಸಹಾಯಧನ ಸಂಗ್ರಹಿಸಿ ನೀಡುವುದು ಹಾಗೂ ಝಿಯಾರತ್ ಟೂರ್ ಗಳನ್ನು ಸಂಘಟಿಸುವುದು ಹೀಗೆ ಎಲ್ಲಾ ರೀತಿಯಿಂದ ಜನರ ಮೆಚ್ಚುಗೆ ಗಳಿಸಿದ್ದರು.


ಮೃತರು ತಾಯಿ ನೆಫೀಸಮ್ಮ, ಪತ್ನಿ ರಂಳತ್, ಮೂವರು ಹೆಣ್ಣು ಮಕ್ಕಳಾದ ಮಾಶಿತಾ, ಅನ್ಸೀರಾ ಮತ್ತು ಬಿಶಾರಾ, ಸಹೋದರಾದ ಅಬ್ಬಾಸ್, ಇಸ್ಮಾಯಿಲ್ ಮತ್ತು ಹುಸೈನ್ ಸ‌ಅದಿ, ಸಹೋದರಿ ಬೀಫಾತಿಮಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!