ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಜರಗಿತ್ತು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದರು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ, ಸ್ಪಂದನ ಸೇವಾ ಸಂಘದ ಸೀತಾರಾಮ್ ಗೌಡ ಬೆಳಾಲು, ಸುರೇಶ್ ಗೌಡ ಹಾಗೂ ವಾಣಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿ ವರ್ಗದವರು, ಗೌರಾಧ್ಯಕ್ಷರಾದ ರಾಮಣ್ಣಗೌಡ. ಅಧ್ಯಕ್ಷರಾದ ದೇಜಪ್ಪ ಗೌಡ. ಕಾರ್ಯದರ್ಶಿ ಗಣೇಶ್ ಗೌಡ ಉಪಸಿತರಿದ್ದರು.


ಎಸ್ ಎಸ್ ಎಲ್ ಸಿ ಅಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಮೋಕ್ಷಿತ್ ಗೌಡ ರವರನ್ನು ಸನ್ಮಾನಿಸಲಾಯಿತು.
ಕೇಶವ ಗೌಡ ಸ್ವಾಗತಿಸಿ. ಯುವರಾಜ್ ಅನಾರ್ ನಿರೂಪಿಸಿ. ಕೃಷ್ಣಪ್ರಸಾದ್ ಧನ್ಯವಾದವಿತ್ತರು.

Leave a Comment

error: Content is protected !!