July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!