23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!