ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!