22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

ಬೆಳ್ತಂಗಡಿ : ಗೃಹಲಕ್ಷ್ಮಿ ಯೋಜನೆಯಲ್ಲಿನ ತಾಂತ್ರಿಕ ತೊಡಕುಗಳನ್ನು ಕೂಡಲೇ ಸರಿಪಡಿಸಿ, ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯುವಂತೆ ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅನೇಕರಿಗೆ ತಾಂತ್ರಿಕ ಕಾರಣದಿಂದ ಮೊದಲ ಕಂತು ಬಂದಿಲ್ಲ. ಉಡುಪಿ ಜಿಲ್ಲೆಯಲ್ಲಿ 2,56,850 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4,03,333 ಕಾರ್ಡ್‌ದಾರರಿದ್ದಾರೆ. ಆಗಸ್ಟ್ 15ಕ್ಕೂ ಮೊದಲು ಉಡುಪಿ ಜಿಲ್ಲೆಯಲ್ಲಿ 2,03,367 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,15,726 ಕಾರ್ಡ್‌ದಾರರು ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಉಡುಪಿ ಜಿಲ್ಲೆಯಲ್ಲಿ 1,79,951 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,83,392 ಕಾರ್ಡ್ ದಾರರಿಗೆ ಯೋಜನೆಯ ಮೊದಲ ಕಂತು ಬಂದಿದೆ. ಉಡುಪಿ ಜಿಲ್ಲೆಯಲ್ಲಿ 23,416 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,334 ಕಾರ್ಡ್‌ದಾರರಿಗೆ ತಾಂತ್ರಿಕ ಕಾರಣದಿಂದ ಯೋಜನೆಯ ಮೊದಲ ಕಂತು ಸಿಕ್ಕಿಲ್ಲ. ಆಗಸ್ಟ್ 15ರ ಮೊದಲು ಅರ್ಜಿ ಸಲ್ಲಿಸಿ, ಸಮ್ಮತಿ ಪಡೆದಿದ್ದರೂ ತಾಂತ್ರಿಕ ಕಾರಣದಿಂದ ಹಣ ಬಾರದ ಅರ್ಜಿಗಳಿಗೆ ತಾಂತ್ರಿಕ ಸಮಸ್ಯೆ ಬಗೆಹರಿದ ಅನಂತರ ಆಗಸ್ಟ್ ತಿಂಗಳಿನಿಂದಲೇ ಸರ್ಕಾರದ ಯೋಜನೆಯ ಫಲ ಸಿಗಲಿದೆ. ಆದರೆ ಹೊಸ ಅರ್ಜಿ ಅಥವಾ ಸರ್ಕಾರ ಸಮ್ಮತಿಸುವ 2ನೇ ಪಟ್ಟಿಯ ಎಲ್ಲಾ ಫಲಾನುಭವಿಗಳಿಗೆ ಆಗಸ್ಟ್‌ ನಿಂದಲೇ ಪೂರ್ವಾನ್ವಯವಾಗುವಂತೆ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Related posts

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya
error: Content is protected !!