25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!