Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya
error: Content is protected !!