July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya
error: Content is protected !!