26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ. ಮ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಖ್ಯಾತ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು ಇವರ ತಂಡದವರಿಂದ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಜರಗಿತು.

ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದ ಉಜಿರೆಯ ಖ್ಯಾತ ಸ್ವರ್ಣೋದ್ಯಮಿ ಆನಂದ ಆಚಾರ್ಯ ಬೆಳಾಲುರವರು ಮಾತನಾಡಿ, ಇವತ್ತು ಯಾವುದೇ ವೃತ್ತಿಗೆ ಅದರದ್ದೇ ಆದ ಮಹತ್ತ್ವವಿದೆ. ಅದರಲ್ಲೂ ಮರದ ಕೆತ್ತನೆ ಕಾರ್ಯವು ಪ್ರಸ್ತುತ ವೃತ್ತಿಯನ್ನು ಮೀರಿ ಕಲೆಯಾಗಿ ಬೆಳೆದಿದೆ. ಹಳ್ಳಿ ಪ್ರದೇಶವಾದ ಬೆಳಾಲು ಪ್ರೌಢಶಾಲೆಯಲ್ಲಿ ಆಯೋಜಿಸಿದ ಇಂತಹ ವಿಶಿಷ್ಟ ಕಾರ್ಯಕ್ರಮ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಆಗಮಿಸಿದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ, ಶಿಲ್ಪಿ ಶಶಿಧರ ಆಚಾರ್ಯ ರವರು ಶುಭಹಾರೈಸಿದರು. ವೇದಿಕೆಯಲ್ಲಿ ಯೋಜನಾಧಿಕಾರಿ ಪ್ರಕಾಶ್ ಗೌಡರವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಚಿದಂಬರ ತೆಂಕಕಾರಂದೂರು, ಶಶಿಧರ ಆಚಾರ್ಯ ಬೆಳಾಲು, ವಸಂತ ಆಚಾರ್ಯ ಪಾರಳ, ಸತೀಶ ಆಚಾರ್ಯ ಬೆಳಾಲು, ಹರೀಶ ಆಚಾರ್ಯ ಬೆಳಾಲು, ಮಕ್ಕಳಾದ ಪ್ರಣವ್ ಮತ್ತು ಪೃಥ್ವೀರಾಮ್ ರವರು ಶಿಲ್ಪಿಗಳಾಗಿ ಭಾಗವಹಿಸಿದ್ದರು.

ಶಿಕ್ಷಕರ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರಿನ ಎಲ್ಲ ಸಂಘಸಂಸ್ಥೆಗಳವರ ಸಹಕಾರದಲ್ಲಿ ಶಿಬಿರವು ಜರಗುತ್ತಿದೆ. ಶಿಬಿರಾರ್ಥಿಗಳಾದ ಪ್ರಣೀತ್ ಸ್ವಾಗತಿಸಿ, ಪುನೀತ ವಂದಿಸಿದರು, ಚಿಂತನೆ ಕಾರ್ಯಕ್ರಮ ನಿರೂಪಿಸಿದರು.

Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya
error: Content is protected !!