March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು.

ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯೆಯಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.

ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು

ಕಾರ್ಯಕ್ರಮದಲ್ಲಿ ಮಾಲಕರ ಮಾತ- ಪಿತರಾದ ಶ್ರೀಮತಿ ಗಿರಿಜಾ- ರಾಮಣ್ಣ ಪೂಜಾರಿ,ಉದ್ಯಮಿ ಚಂದ್ರಶೇಖರ್ ,ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್,ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್,ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು,ಮಕ್ಕಳಾದ ಸಾಹಿತ್ಯ,ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಮತ್ತು ಒದಗಿಸಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya
error: Content is protected !!