23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

ಬೆಳ್ತಂಗಡಿ: 2024 ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಸುಸುತ್ರ ನಿರ್ವಹಣೆಗಾಗಿ ನೋಡೆಲ್ ಹಾಗೂ ಸಮನ್ವಯ ಅಧಿಕಾರಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.


ದ.ಕ ಮಂಗಳೂರಿನ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮಾಣಿಕ್ಯ ಅವರನ್ನು ನೋಡೆಲ್ ಅಧಿಕಾರಿಯಾಗಿ ಹಾಗೂ ಪಶುಸಂಗೋಪನಾ ಇಲಾಖೆಯಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಕೆ. ಜಯಕೀರ್ತಿ ಜೈನ್ ಅವರು ಸಮನ್ವಯ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.


ಅ.5ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ -2024 ಆಚರಣೆಯ ಸಮಾಲೋಚನಾ ಸಭೆಯಲ್ಲಿ ಆದ ನಿರ್ಣಯದಂತೆ ದ.ಕ ಜಿಲ್ಲಾಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ನೇಮಕಗೊಳಿಸಿ ಈ ಆದೇಶ ಮಾಡಿದ್ದಾರೆ.

Related posts

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya
error: Content is protected !!