23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya
error: Content is protected !!