July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya
error: Content is protected !!