ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!