30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
error: Content is protected !!