April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!