23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

ಬೆಳ್ತಂಗಡಿ: ಪ್ರೋ ಕೆ ಎಸ್. ಭಗವಾನ್ ಅವರು ಒಕ್ಕಲಿಗರ ಸಮುದಾಯದವರು ಸಂಸ್ಕೃತಿ ಹೀನ ಪಶುಗಳು ಎಂಬ ಕುಚೋದ್ಯದ ಹೇಳಿಕೆಯನ್ನು ನೀಡಿ ಒಕ್ಕಲಿಗರ ಸಮುದಾಯವನ್ನು ಅವಮಾನಿಸಿರುವುದು ಅತ್ಯಂತ ಖಂಡನೀಯ ಸಂಗತಿ. ಈ ಹೇಳಿಕೆಯು ಅವರ ಮಾನಸಿಕ ಅಸ್ವಸ್ಥತೆಯನ್ನು ಸೂಚಿಸುತ್ತದೆ. ಮತಿಭ್ರಮಣೆಗೊಂಡು ಆಡಿದ ಮಾತುಗಳು ಸಾಮಾಜಿಕ ದುಷ್ಪಾರಿಣಾಮಕ್ಕೆ ಕಾರಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಶ್ರೀ ಭಗವಾನ್‌ಗೆ ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.


ನಮ್ಮ ದೇಶದ ಬೆನ್ನೆಲುಬು ರೈತ. ಸಮಸ್ತ ರೈತ ಸಮುದಾಯವನ್ನು ಒಕ್ಕಲಿಗ ಸಮುದಾಯ ಪ್ರತಿನಿಧಿಸುತ್ತದೆ. ಒಕ್ಕಲುತನ ಸಂಸ್ಕೃತಿಯನ್ನು ಪ್ರತಿಪಾದಿಸಿಕೊಂಡು ಬಂದಿರುವ ಒಕ್ಕಲಿಗ ಸಮುದಾಯದವರು ಈ ದೇಶದ ಮಣ್ಣಿನ ಮಕ್ಕಳು. ನಮ್ಮ ಸಮುದಾಯಕ್ಕೆ ಸೇರಿದ ದೇಶ ಕಂಡ ಮುತ್ಸದ್ಧಿ ಹಿರಿಯ ರಾಜಕಾರಣಿ, ಮಣ್ಣಿನ ಮಗ ದೇವೇಗೌಡರವರು ದೇಶದ ಪ್ರಧಾನ ಮಂತ್ರಿಯಾಗಿ ಈ ದೇಶದ ಕೀರ್ತಿಯನ್ನು ಹೆಚ್ಚಿಸಿದವರು, ವಿಶ್ವ ಮಾನವ ಸಂದೇಶವನ್ನು ಪ್ರಪಂಚಕ್ಕೆ ಸಾರಿದ ರಾಷ್ಟ್ರಕವಿ ಕುವೆಂಪುರವರು ಇದೇ ಸಮುದಾಯದವರು. ಸಾಮಾಜಿಕ ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಹಾಗೂ ಆರ್ಥಿಕವಾಗಿ ಈ ಸಮುದಾಯ ದೇಶಕ್ಕೆ ತನ್ನದೇ ಆದ ಅನೇಕ ಕೊಡುಗೆಗಳನ್ನು ನೀಡಿದೆ ಮತ್ತು ನೀಡುತ್ತಿದೆ. ಭಗವಾನ್ ರವರ ಹೇಳಿಕೆಯು ಅಸಮರ್ಥನೀಯ ಅಸಂವಿಧಾನಿಕವಾಗಿದ್ದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘವು ಅವರ ಹೇಳಿಕೆಯನ್ನು ಖಂಡಿಸುತ್ತದೆ ಮತ್ತು ಸರ್ಕಾರವು ಅವರ ವಿರುದ್ದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಗ್ರಹಿಸಿದರು.

             

Related posts

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
error: Content is protected !!