25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ. ಮ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಖ್ಯಾತ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು ಇವರ ತಂಡದವರಿಂದ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ಜರಗಿತು.

ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದ ಉಜಿರೆಯ ಖ್ಯಾತ ಸ್ವರ್ಣೋದ್ಯಮಿ ಆನಂದ ಆಚಾರ್ಯ ಬೆಳಾಲುರವರು ಮಾತನಾಡಿ, ಇವತ್ತು ಯಾವುದೇ ವೃತ್ತಿಗೆ ಅದರದ್ದೇ ಆದ ಮಹತ್ತ್ವವಿದೆ. ಅದರಲ್ಲೂ ಮರದ ಕೆತ್ತನೆ ಕಾರ್ಯವು ಪ್ರಸ್ತುತ ವೃತ್ತಿಯನ್ನು ಮೀರಿ ಕಲೆಯಾಗಿ ಬೆಳೆದಿದೆ. ಹಳ್ಳಿ ಪ್ರದೇಶವಾದ ಬೆಳಾಲು ಪ್ರೌಢಶಾಲೆಯಲ್ಲಿ ಆಯೋಜಿಸಿದ ಇಂತಹ ವಿಶಿಷ್ಟ ಕಾರ್ಯಕ್ರಮ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಅತಿಥಿಗಳಾಗಿ ಆಗಮಿಸಿದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ, ಶಿಲ್ಪಿ ಶಶಿಧರ ಆಚಾರ್ಯ ರವರು ಶುಭಹಾರೈಸಿದರು. ವೇದಿಕೆಯಲ್ಲಿ ಯೋಜನಾಧಿಕಾರಿ ಪ್ರಕಾಶ್ ಗೌಡರವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಚಿದಂಬರ ತೆಂಕಕಾರಂದೂರು, ಶಶಿಧರ ಆಚಾರ್ಯ ಬೆಳಾಲು, ವಸಂತ ಆಚಾರ್ಯ ಪಾರಳ, ಸತೀಶ ಆಚಾರ್ಯ ಬೆಳಾಲು, ಹರೀಶ ಆಚಾರ್ಯ ಬೆಳಾಲು, ಮಕ್ಕಳಾದ ಪ್ರಣವ್ ಮತ್ತು ಪೃಥ್ವೀರಾಮ್ ರವರು ಶಿಲ್ಪಿಗಳಾಗಿ ಭಾಗವಹಿಸಿದ್ದರು.

ಶಿಕ್ಷಕರ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರಿನ ಎಲ್ಲ ಸಂಘಸಂಸ್ಥೆಗಳವರ ಸಹಕಾರದಲ್ಲಿ ಶಿಬಿರವು ಜರಗುತ್ತಿದೆ. ಶಿಬಿರಾರ್ಥಿಗಳಾದ ಪ್ರಣೀತ್ ಸ್ವಾಗತಿಸಿ, ಪುನೀತ ವಂದಿಸಿದರು, ಚಿಂತನೆ ಕಾರ್ಯಕ್ರಮ ನಿರೂಪಿಸಿದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya
error: Content is protected !!