23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು.

ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯೆಯಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.

ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು

ಕಾರ್ಯಕ್ರಮದಲ್ಲಿ ಮಾಲಕರ ಮಾತ- ಪಿತರಾದ ಶ್ರೀಮತಿ ಗಿರಿಜಾ- ರಾಮಣ್ಣ ಪೂಜಾರಿ,ಉದ್ಯಮಿ ಚಂದ್ರಶೇಖರ್ ,ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್,ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್,ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು,ಮಕ್ಕಳಾದ ಸಾಹಿತ್ಯ,ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಮತ್ತು ಒದಗಿಸಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
error: Content is protected !!