April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು.

ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯೆಯಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.

ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು

ಕಾರ್ಯಕ್ರಮದಲ್ಲಿ ಮಾಲಕರ ಮಾತ- ಪಿತರಾದ ಶ್ರೀಮತಿ ಗಿರಿಜಾ- ರಾಮಣ್ಣ ಪೂಜಾರಿ,ಉದ್ಯಮಿ ಚಂದ್ರಶೇಖರ್ ,ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್,ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್,ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು,ಮಕ್ಕಳಾದ ಸಾಹಿತ್ಯ,ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಮತ್ತು ಒದಗಿಸಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya
error: Content is protected !!