26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

ಬೆಳ್ತಂಗಡಿ: 2024 ಫೆಬ್ರವರಿಯಲ್ಲಿ ವೇಣೂರಿನಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಕಾರ್ಯಕ್ರಮಗಳ ಸುಸುತ್ರ ನಿರ್ವಹಣೆಗಾಗಿ ನೋಡೆಲ್ ಹಾಗೂ ಸಮನ್ವಯ ಅಧಿಕಾರಿಗಳನ್ನು ನೇಮಕಗೊಳಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.


ದ.ಕ ಮಂಗಳೂರಿನ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮಾಣಿಕ್ಯ ಅವರನ್ನು ನೋಡೆಲ್ ಅಧಿಕಾರಿಯಾಗಿ ಹಾಗೂ ಪಶುಸಂಗೋಪನಾ ಇಲಾಖೆಯಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಕೆ. ಜಯಕೀರ್ತಿ ಜೈನ್ ಅವರು ಸಮನ್ವಯ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.


ಅ.5ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ -2024 ಆಚರಣೆಯ ಸಮಾಲೋಚನಾ ಸಭೆಯಲ್ಲಿ ಆದ ನಿರ್ಣಯದಂತೆ ದ.ಕ ಜಿಲ್ಲಾಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ನೇಮಕಗೊಳಿಸಿ ಈ ಆದೇಶ ಮಾಡಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!