25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣವನ್ನು ಬೆಳ್ತಂಗಡಿ ತಹಶೀಲ್ದಾರರು ಪತ್ತೆ ಹಚ್ಚಿದ್ದು, ಈ ಬಗ್ಗೆ ಭೂ ವಿಜ್ಞಾನ ಇಲಾಖೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು ಭೂ ವಿಜ್ಞಾನ ಇಲಾಖೆಯ ಲೊಯಲ್ ಗ್ಲಾಡ್ ಸನ್ ಮಿರಾಂಡರವರು ಅ.15ರಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಬೆಳ್ತಂಗಡಿ ತಹಶೀಲ್ದಾರರು ತಮ್ಮ ಸಿಬ್ಬಂದಿಗಳೊಂದಿಗೆ ಕಡಿರುದ್ಯಾವರ ಗ್ರಾಮದ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುವ ಸಮಯದಲ್ಲಿ ಕಡಿರುದ್ಯಾವರ ಗ್ರಾಮದಲ್ಲಿ ಹರಿಯುವ ನೇತ್ರಾವತಿ ನದಿಯಿಂದ ಡ್ರೆಜ್ಜಿಂಗ್ ಯಂತ್ರದ ಮಖಾಂತರ ಮರಳನ್ನು ತೆಗೆಯುತ್ತಿರುವುದು ಕಂಡು ಬಂದಿದ್ದು, ಇಂದಬೆಟ್ಟು ಗ್ರಾಮದ ಮನ್ನಡ್ಕ ಎಂಬಲ್ಲಿ ಅಂದಾಜು ರೂ. 1400 ಮೌಲ್ಯದ ಅರ್ಧ ಪಿಕಾಪ್‌ನಷ್ಟು ಮರಳನ್ನು ಸಂಗ್ರಹ ಮಾಡಿರುವುದು ಕಂಡು ಪತ್ತೆಯಾಗಿದೆ. ಅನಧಿಕೃತವಾಗಿ ಮರಳನ್ನು ತೆಗೆದು ಸಂಗ್ರಹ ಮಾಡಿದ ಶ್ರೀನಿವಾಸನ ಗೌಡ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದರು. ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಅಕ್ರನಂ೯೯/೨೦೨೩ ಕಲಂ: ೩೭೯ IPಅ. ಯಂತೆ ಪ್ರಕರಣ ದಾಖಲಾಗಿದೆ.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!